ಮಹಾಭಾರತ ಯುದ್ಧವನ್ನು ಸಂಜಯನ ಕಣ್ಣಲ್ಲಿ ನೋಡಿ ಬಳಲಿದ್ದ ಧೃತರಾಷ್ಟ್ರ...ಬೆಂಗಳೂರಿನ ಲಾಲ್ ಬಾಗ್ ಉದ್ಯಾನವನದಲ್ಲಿ ಕುಳಿತು ಶ್ರೀ ವೇದವ್ಯಾಸರನ್ನು ಪ್ರಾರ್ಥಿಸಿ "ನನಗೆ ಯುದ್ಧವನ್ನು ನೋಡಿ ಸಾಕಾಗಿದೆ, ದಯಮಾಡಿ ಒಂದು ಒಳ್ಳೆಯ ಸಂಧರ್ಭವನ್ನು ನೋಡಿ, ಕೇಳಿ ಅನುಭವಿಸುವ ಸುಯೋಗವನ್ನು ಕರುಣಿಸಿ ಗುರುದೇವ" ಎಂದು ಕೇಳುತ್ತಾನೆ
ಆಗ ವೇದವ್ಯಾಸರು ಪ್ರತ್ಯಕ್ಷರಾಗಿ "ಮಗು ಧೃತರಾಷ್ಟ್ರ, ನಾನು ನಿನಗೆ ಮತ್ತೆ ದಿವ್ಯದೃಷ್ಟಿಯನ್ನು ಕರುಣಿಸಲಾರೆ ಅಥವಾ ಸಂಜಯನನ್ನು ಕಳಿಸಲಾರೆ, ಆದರೆ ನಾಲ್ಕು ಕಣ್ಣುಗಳು ನಿನಗೆ ಒಂದು ಸುಂದರ ಸಮಾರಂಭದ ವಿವರಣೆಯನ್ನು ಕೊಡುವಂತೆ ಮಾಡಬಲ್ಲೆ"
"ಆಗಲಿ ಗುರುದೇವ ಹೇಗೆ ಸರಿ ಅನ್ನಿಸುತ್ತೋ ಹಾಗೆ ಆಶೀರ್ವಾದ ಮಾಡಿ"
ವೇದವ್ಯಾಸರು ಅದೃಶ್ಯರಾಗಿ ಅವರ ಜಾಗದಲ್ಲಿ ಎರಡು ಜೊತೆ ಸುಂದರ ಕಣ್ಣುಗಳು ಮೂಡಿಬರುತ್ತವೆ.
"ಮಹಾರಾಜ.. ಇಂದು ನಿಮ್ಮನ್ನು ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೋ ದ್ವೀಪೇ ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲೇವಾಹನಶಖೇ ಬೌದ್ಧಾವತಾರೇ ಕರ್ನಾಟಕ ಕ್ಷೇತ್ರೇ, ಬೆಂಗಳೂರು ನಗರೇ, ಸುಚಿತ್ರ ಫಿಲಂ ಸೊಸೈಟಿ ಸಭಾಂಗಣೇ... ಶ್ರೀ ನಟರಾಜು ಸೀಗೆಕೋಟೆ ಮರಿಯಪ್ಪ ಅವರ ಅವಳಿ ಮಕ್ಕಳ ತೊಟ್ಟಿಲು ಶಾಸ್ತ್ರ ಅಂದರೆ ನಾಮಕರಣಕ್ಕೆ ಕರೆದೊಯ್ಯುತಿದ್ದೇವೆ"
"ಪುಟಾಣಿಗಳೇ ಸ್ವಲ್ಪ ವಿವರಿಸಿ"
"ಮಹಾರಾಜ, ಬ್ಲಾಗ್ ಲೋಕದಲ್ಲಿ ಎಲೆ ಮರೆಯಲ್ಲಿ ಹಣ್ಣಾಗುತ್ತಿರುವ ಎಷ್ಟೋ ಸುಂದರ ಕಾಯಿಗಳನ್ನು ಲೋಕಕ್ಕೆ ಪರಿಚಯಿಸುತ್ತಿರುವ ಶ್ರೀ ನಟರಾಜು ಅವರು ಬರೆದ ಎರಡು ಪುಸ್ತಕಗಳು ಇಂದು ಲೋಕಾರ್ಪಣಗೊಳ್ಳುತ್ತಿದೆ. ದೂರದೂರಿನಿಂದ ಬಂದ ಸುಂದರಾಂಗ ಜಾಣ ಎನ್ನುವಂತೆ, ದೂರದ ರಾಜ್ಯದಲ್ಲಿದ್ದರೂ ಕರುನಾಡಿಗೆ, ಕರುನಾಡಿನ ಸ್ನೇಹಿತರಿಗೆ ಮಿಡಿಯುವ ಅವರ ಮನಸ್ಸು ಹೂವಿನಷ್ಟೇ ಮಧುರ"
"ಓಹ್ ಚೆನ್ನಾಗಿದೆ ವಿ"ವರ್ಣನೆ"ಮುಂದುವರೆಯಲಿ"
"ದೊರೆ.... ಭಾನುವಾರವಾದ್ದರಿಂದ ಸಮಾರಂಭ ಸ್ವಲ್ಪ ನಿಧಾನವಾಗಿ ಶುರುವಾಗಿದೆ.. ಹೊರಗೆ ತಮ್ಮ ಸ್ನೇಹಿತರನ್ನು ಭೇಟಿ ಮಾಡಿ, ಉಭಯ ಕುಶಲ ಮಾತಾಡಿಸಿ, ಫೋಟೋ ತೆಗಿಸಿಕೊಂಡು ನಲಿಯುತ್ತಿದ್ದ ಸ್ನೇಹಿತ ಸ್ನೇಹಿತೆಯರನ್ನು ನಟರಾಜು ಅವರು ನಿಧಾನವಾದ ಸ್ವರದಲ್ಲಿ ಎಲ್ಲರನ್ನು ಸಭಾಂಗಣಕ್ಕೆ ಕರೆಯುತಿದ್ದಾರೆ".
"ಅರಸರೆ ಈಗೋ ನೋಡಿ ಒಂದು ಸುಂದರ ಜಾನಪದ ಗೀತೆಯಿಂದ ಕಾರ್ಯಕ್ರಮ ಶುರುವಾಯಿತು... ನಿರೂಪಕರಿಂದ ಕಾರ್ಯಕ್ರಮದ ಕಿರು ಪರಿಚಯ, ಸ್ವಾಗತ ಮಾತುಗಳು ನಡೆಯುತ್ತಿದೆ."
ಇಂದಿನ ಕಾರ್ಯಕ್ರಮದ ಒಂದು ಪಕ್ಷಿ ನೋಟ ನಿಮಗೆ ನೀಡುತ್ತಿದ್ದೇವೆ... ಮಹನೀಯರ ಹೆಸರು ಮತ್ತು ಅವರ ಕಿರುಪರಿಚಯ ಈ ಕೆಳಗಿನಂತಿದೆ ಮತ್ತು ನಂತರದ ವಿವರಣೆಯನ್ನು ಫೇಸ್ ಬುಕ್ನಲ್ಲಿ ಚಿತ್ರಗಳು ಹಾಕಿರುತ್ತಾರೆ.. ಅದನ್ನ ನೋಡಲು ನಿಮಗೆ ನಾವು ಕಣ್ಣಾಗುತ್ತೇವೆ"
ಮೊದಲಿಗೆ ನಿರೂಪಕ ವಿನಯ್ ಅವರು ಅಬ್ದುಲ್ ಸತ್ತಾರ್ ಅವರನ್ನು ವೇದಿಕೆಗೆ ಕರೆದು ರವಿ ಮೂರ್ನಾಡ್ ಅವರ ಬಗ್ಗೆ ಮಾತಾಡೋಕೆ ಹೇಳಿದ್ರು. ಅವರು ಮಾತಾಡ್ತಾ ರವಿಯವರು ಎಲೆ ಮರೆ ಕಾಯಿಗಳಿಗೆ ಕೊಡ್ತಾ ಇದ್ದ ಪ್ರೋತ್ಸಾಹ, ಅವರ ಬ್ಲಾಗ್, ಕನ್ನಡ ಪ್ರೀತಿ, ಕನ್ನಡ ಬ್ಲಾಗ್ ಗ್ರೂಪ್ ಲಿ ಅವರ ಸಾಧನೆ ಬಗ್ಗೆ ಮಾತಾಡಿ ಒಂದು ನಿಮಿಷದ ಮೌನಾಚರಣೆ ಗೆ ಕರೆ ಕೊಟ್ಟರು.
ಆಗ ವೇದವ್ಯಾಸರು ಪ್ರತ್ಯಕ್ಷರಾಗಿ "ಮಗು ಧೃತರಾಷ್ಟ್ರ, ನಾನು ನಿನಗೆ ಮತ್ತೆ ದಿವ್ಯದೃಷ್ಟಿಯನ್ನು ಕರುಣಿಸಲಾರೆ ಅಥವಾ ಸಂಜಯನನ್ನು ಕಳಿಸಲಾರೆ, ಆದರೆ ನಾಲ್ಕು ಕಣ್ಣುಗಳು ನಿನಗೆ ಒಂದು ಸುಂದರ ಸಮಾರಂಭದ ವಿವರಣೆಯನ್ನು ಕೊಡುವಂತೆ ಮಾಡಬಲ್ಲೆ"
"ಆಗಲಿ ಗುರುದೇವ ಹೇಗೆ ಸರಿ ಅನ್ನಿಸುತ್ತೋ ಹಾಗೆ ಆಶೀರ್ವಾದ ಮಾಡಿ"
ವೇದವ್ಯಾಸರು ಅದೃಶ್ಯರಾಗಿ ಅವರ ಜಾಗದಲ್ಲಿ ಎರಡು ಜೊತೆ ಸುಂದರ ಕಣ್ಣುಗಳು ಮೂಡಿಬರುತ್ತವೆ.
"ಮಹಾರಾಜ.. ಇಂದು ನಿಮ್ಮನ್ನು ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೋ ದ್ವೀಪೇ ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲೇವಾಹನಶಖೇ ಬೌದ್ಧಾವತಾರೇ ಕರ್ನಾಟಕ ಕ್ಷೇತ್ರೇ, ಬೆಂಗಳೂರು ನಗರೇ, ಸುಚಿತ್ರ ಫಿಲಂ ಸೊಸೈಟಿ ಸಭಾಂಗಣೇ... ಶ್ರೀ ನಟರಾಜು ಸೀಗೆಕೋಟೆ ಮರಿಯಪ್ಪ ಅವರ ಅವಳಿ ಮಕ್ಕಳ ತೊಟ್ಟಿಲು ಶಾಸ್ತ್ರ ಅಂದರೆ ನಾಮಕರಣಕ್ಕೆ ಕರೆದೊಯ್ಯುತಿದ್ದೇವೆ"
"ಪುಟಾಣಿಗಳೇ ಸ್ವಲ್ಪ ವಿವರಿಸಿ"
"ಮಹಾರಾಜ, ಬ್ಲಾಗ್ ಲೋಕದಲ್ಲಿ ಎಲೆ ಮರೆಯಲ್ಲಿ ಹಣ್ಣಾಗುತ್ತಿರುವ ಎಷ್ಟೋ ಸುಂದರ ಕಾಯಿಗಳನ್ನು ಲೋಕಕ್ಕೆ ಪರಿಚಯಿಸುತ್ತಿರುವ ಶ್ರೀ ನಟರಾಜು ಅವರು ಬರೆದ ಎರಡು ಪುಸ್ತಕಗಳು ಇಂದು ಲೋಕಾರ್ಪಣಗೊಳ್ಳುತ್ತಿದೆ. ದೂರದೂರಿನಿಂದ ಬಂದ ಸುಂದರಾಂಗ ಜಾಣ ಎನ್ನುವಂತೆ, ದೂರದ ರಾಜ್ಯದಲ್ಲಿದ್ದರೂ ಕರುನಾಡಿಗೆ, ಕರುನಾಡಿನ ಸ್ನೇಹಿತರಿಗೆ ಮಿಡಿಯುವ ಅವರ ಮನಸ್ಸು ಹೂವಿನಷ್ಟೇ ಮಧುರ"
![]() |
| ಚಿತ್ರಕೃಪೆ - ಪ್ರವರ ಕೊಟ್ಟೂರು |
"ಓಹ್ ಚೆನ್ನಾಗಿದೆ ವಿ"ವರ್ಣನೆ"ಮುಂದುವರೆಯಲಿ"
"ದೊರೆ.... ಭಾನುವಾರವಾದ್ದರಿಂದ ಸಮಾರಂಭ ಸ್ವಲ್ಪ ನಿಧಾನವಾಗಿ ಶುರುವಾಗಿದೆ.. ಹೊರಗೆ ತಮ್ಮ ಸ್ನೇಹಿತರನ್ನು ಭೇಟಿ ಮಾಡಿ, ಉಭಯ ಕುಶಲ ಮಾತಾಡಿಸಿ, ಫೋಟೋ ತೆಗಿಸಿಕೊಂಡು ನಲಿಯುತ್ತಿದ್ದ ಸ್ನೇಹಿತ ಸ್ನೇಹಿತೆಯರನ್ನು ನಟರಾಜು ಅವರು ನಿಧಾನವಾದ ಸ್ವರದಲ್ಲಿ ಎಲ್ಲರನ್ನು ಸಭಾಂಗಣಕ್ಕೆ ಕರೆಯುತಿದ್ದಾರೆ".
"ಅರಸರೆ ಈಗೋ ನೋಡಿ ಒಂದು ಸುಂದರ ಜಾನಪದ ಗೀತೆಯಿಂದ ಕಾರ್ಯಕ್ರಮ ಶುರುವಾಯಿತು... ನಿರೂಪಕರಿಂದ ಕಾರ್ಯಕ್ರಮದ ಕಿರು ಪರಿಚಯ, ಸ್ವಾಗತ ಮಾತುಗಳು ನಡೆಯುತ್ತಿದೆ."
ಇಂದಿನ ಕಾರ್ಯಕ್ರಮದ ಒಂದು ಪಕ್ಷಿ ನೋಟ ನಿಮಗೆ ನೀಡುತ್ತಿದ್ದೇವೆ... ಮಹನೀಯರ ಹೆಸರು ಮತ್ತು ಅವರ ಕಿರುಪರಿಚಯ ಈ ಕೆಳಗಿನಂತಿದೆ ಮತ್ತು ನಂತರದ ವಿವರಣೆಯನ್ನು ಫೇಸ್ ಬುಕ್ನಲ್ಲಿ ಚಿತ್ರಗಳು ಹಾಕಿರುತ್ತಾರೆ.. ಅದನ್ನ ನೋಡಲು ನಿಮಗೆ ನಾವು ಕಣ್ಣಾಗುತ್ತೇವೆ"
ಮೊದಲಿಗೆ ನಿರೂಪಕ ವಿನಯ್ ಅವರು ಅಬ್ದುಲ್ ಸತ್ತಾರ್ ಅವರನ್ನು ವೇದಿಕೆಗೆ ಕರೆದು ರವಿ ಮೂರ್ನಾಡ್ ಅವರ ಬಗ್ಗೆ ಮಾತಾಡೋಕೆ ಹೇಳಿದ್ರು. ಅವರು ಮಾತಾಡ್ತಾ ರವಿಯವರು ಎಲೆ ಮರೆ ಕಾಯಿಗಳಿಗೆ ಕೊಡ್ತಾ ಇದ್ದ ಪ್ರೋತ್ಸಾಹ, ಅವರ ಬ್ಲಾಗ್, ಕನ್ನಡ ಪ್ರೀತಿ, ಕನ್ನಡ ಬ್ಲಾಗ್ ಗ್ರೂಪ್ ಲಿ ಅವರ ಸಾಧನೆ ಬಗ್ಗೆ ಮಾತಾಡಿ ಒಂದು ನಿಮಿಷದ ಮೌನಾಚರಣೆ ಗೆ ಕರೆ ಕೊಟ್ಟರು.
ಇವಾಗ ಗಣ್ಯರನ್ನು ವೇದಿಕೆಗೆ ಕರೆಸಲಾಗುತ್ತಿದ್ದೆ ಮತ್ತು ಡಾ. ಎಸ್.ಎಂ.ನಟರಾಜು ಅವರ 'ವಂಡರ್ ಲ್ಯಾಂಡಿನ ಪುಟ್ಟ ರಾಜಕುಮಾರನೂ... ಮತ್ತು ಖುಷಿನಗರಿಯ ಆತನ ನಲ್ಮೆಯ ಗೆಳತಿಯೂ...' ಹಾಗೂ 'ಎಲೆಮರೆಕಾಯಿ' ಕೃತಿಗಳು ಗೋಪಾಲ ವಾಜಪೇಯಿ ಅವರಿಂದ ಬಿಡುಗಡೆಯಾಗುತ್ತಿದೆ.
ಚೇತನಾ ತೀರ್ಥಹಳ್ಳಿಯವರು ಎರಡು ಕೃತಿಯ ಬಗ್ಗೆ ಮಾತಾಡುತ್ತಾ . "ವಂಡರ್ ಲ್ಯಾಂಡಿನ... " ಈ ಪುಸ್ತಕ ಪತ್ರ ಕಾದಂಬರಿಯ ರೂಪದಲ್ಲಿದೆ ಅಂತ ಹೇಳುತ್ತಾ ಇದ್ದಾರೆ, ಜೊತೆಗೆ ಹೇಗೆ ಮತ್ತು ಯಾಕೆ ಆಪ್ತವಾಗುತ್ತದೆ ಎಂದು ತಿಳಿಸುತ್ತಿದ್ದಾರೆ . ಎಲೆ ಮರೆ ಕಾಯಿಯನ್ನು ಅವರು ಕಾರಣಾಂತರಗಳಿಂದ ಓದಲಾಗಲಿಲ್ಲವಂತೆ ಹಾಗಾಗಿ ಬ್ಲಾಗ್ ಬಗ್ಗೆ ಮಾತಾಡುತ್ತಾ ಇದ್ದಾರೆ.
ಗೋಪಾಲ ವಾಜಪೇಯಿ ಅವರಿಂದ ಶುಭ ನುಡಿಗಳು ಕೇಳಿಬರುತ್ತಿದೆ
"ಜರಗನಹಳ್ಳಿ ಶಿವಶಂಕರ್ ಅವರಿಂದ ಭಾಷಣ ನಡೆಯಬೇಕು ಮತ್ತು ಚುಟುಕು ಸ್ಪರ್ಧೆಯ ಬಹುಮಾನ ವಿತರಣೆ... ವಿಜೇತರಿಗೆ ಅಭಿನಂದನೆ ಸಲ್ಲಿಸುತ್ತಾ ಬಹುಮಾನ ವಿತರಿಸಲು ಸಜ್ಜಾಗುತ್ತಿದೆ ವೇದಿಕೆ"
"ಮಹಾರಾಜ ನಿಮಗೆ ವೀಕ್ಷಕ ವಿವರಣೆ ಹೇಳುತ್ತಲೇ ನಮಗೆ ಅಲ್ಲಿ ಹೋಗಲು ಮನಸಾಗುತ್ತಿದೆ... ಅದೂ ಅಲ್ಲದೆ ಒಂದು ಜೊತೆಯ ಕಣ್ಣುಗಳು ಬರೆದ ಚುಟುಕಗಳಿಗೆ ಮೊದಲನೇ ಬಹುಮಾನ ಕೂಡ ಬಂದಿದೆ.. ಅದನ್ನು ಸ್ವೀಕರಿಸಲು ಅಲ್ಲಿಗೆ ಹೋಗಲೇ ಬೇಕು.. ನಿಮ್ಮ ಅಪ್ಪಣೆ ಇದ್ದರೆ ನಾವಿಬ್ಬರು ಅಲ್ಲಿಗೆ ಹೋಗಿಬಂದು ಮತ್ತೆ ಸುದೀರ್ಘ ವಿವರಣೆ ಕೊಡುತ್ತವೆ ಆಗಬಹುದೇ ಮಹಾರಾಜ?"
"ಓಹ್ ಹೌದೆ ಮಗು.. ಅಭಿನಂದನೆಗಳು ಹೋಗಿಬನ್ನಿ... ಅಲ್ಲಿಯವರೆಗೆ ನಾನು ಇಲ್ಲೇ ಓಡಾಡಿಕೊಂಡು ಇರ್ತೇನೆ.. ಬರುವಾಗ ಆ ಎರಡು ಪುಸ್ತಕಗಳನ್ನು ತನ್ನಿರಿ"
"ಹಾಗೆ ಆಗಲಿ ಮಹಾರಾಜ.. ಬೇಗ ಬಂದು ಬಿಡುತ್ತೇವೆ.. ಬಂದು ಮುಂದಿನ ಕಾರ್ಯಕ್ರಮದ ವಿವರಣೆಯನ್ನು ನೀಡುತ್ತೇವೆ ... ನಮಸ್ಕಾರ ಮಹಾರಾಜ"
ನಾಲ್ಕು ಜೊತೆ ಕಣ್ಣುಗಳು ಸೀದಾ ಸಭಾಂಗಣಕ್ಕೆ ಬಂದರು,ಅಷ್ಟರಲ್ಲಿ ವೇದಿಕೆ ಬಹುಮಾನವನ್ನು ವಿತರಿಸಲು ವೇದಿಕೆ ಸಿದ್ಧವಾಗಿತ್ತು. ವಿಜೇತರ ಹೆಸರುಗಳನ್ನೂ, ಅವರ ಕಿರುಪರಿಚಯ ಮಾಡಿಸುವ ಮಾತುಗಳನ್ನು ಭಿತ್ತರಗೊಳಿಸುತಿತ್ತು ಒಂದು ಸುಂದರವಾಣಿ!
| ಚಿತ್ರ ಕೃಪೆ - ಪಂಜು ಅಂತರ್ಜಾಲ |
| ಚಿತ್ರ ಕೃಪೆ - ಪಂಜು |
ಬಹುಮಾನ ಸ್ವೀಕರಿಸಿದ ನಂತರ, ಮತ್ತೆ ಕಾರ್ಯಕ್ರಮದ ವೀಕ್ಷಕ ವಿವರಣೆ ಮುಂದುವರೆಯಿತು..
"ಮಹಾರಾಜ..ನಾವು ಬಂದೆವು... ಮತ್ತೆ ಮುಂದುವರೆಸುತ್ತಿದ್ದೇವೆ... ಡಾ. ಬಾನಂದೂರು ಕೆಂಪಯ್ಯ ಅವರಿಂದ ಮತ್ತೆ ನಾಲ್ಕು ಮಾತುಗಳು ಜೊತೆಗೆ ಹಾಡುಗಳನ್ನೂ ಹಾಡಿದರು, ಲೇಖಕ ನಟರಾಜು ಅವರು ಒಂದು ಕಿರು ಮಾತಗಳನ್ನು ಉಲಿದರು ಮತ್ತು ಪ್ರಕಾಶಕರಿಂದ ಕಿರು ಭಾಷಣ ನಡೆಯಿತು . ನಂತರ ಎನ್ ಸಿ ಮಹೇಶ ಅವರಿಂದ ಮಾತುಗಳು, ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದ ಅರ್ಪಣೆಯ ಸಮಯದಲ್ಲಿ ಉಷಾ ಕಟ್ಟೆಮನೆಯವರು ಬಂದಿದ್ದನ್ನ ಗಮನಿಸಿ ಅವರನ್ನು ವೇದಿಕೆಗೆ ಕರೆದು ಗೌರವಾರ್ಪಣೆ ಮಾಡಲಾಯಿತು"
"ಮಹಾರಾಜ ಇದು ಇಂದಿನ ಕಾರ್ಯಕ್ರಮ ಒಂದು ವಿವರಣೆ. ನಿಮಗೆ ಇಷ್ಟವಾಯಿತೆ?"
"ಪುಟಾಣಿಗಳೇ ನಿಮ್ಮ ಮಧುರವಾಣಿಯಲ್ಲಿ ಅರಳಿದ ಕಾರ್ಯಕ್ರಮದ ವಿವರಣೆ ಕುರುಕ್ಷೇತ್ರದ ವಿವರಣೆಗಿಂತ ಒಂದು ಕೈ ಮೇಲು ಎನ್ನಬಹುದು.. ಶ್ರೀ ಕೃಷ್ಣನ ಆಶೀರ್ವಾದ ಬ್ಲಾಗ್ ಲೋಕದ ಎಲ್ಲ ತಾರೆಗಳ ಮೇಲೂಇರಲಿ ... ಹಾಗು ಇಂದಿನ ಲೇಖಕ ಮೃದು ಮನಸಿನ ನಟರಾಜು ಅವರಿಗೆ ಯಶಸ್ಸು ಸದಾ ನೆರಳಿನಂತೆ ಇರಲಿ ಎಂದು ಆಶೀರ್ವಾದ ಕಳಿಸುತ್ತಿದ್ದೇನೆ. ಶುಭವಾಗಲಿ ಪುಟಾಣಿಗಳೇ!!!"
"ಧನ್ಯವಾದಗಳು ಮಹಾರಾಜ.. !"
(ಅಣ್ಣಯ್ಯ.. ಕಾರ್ಯಕ್ರಮ ತುಂಬಾ ಸುಂದರವಾಗಿತ್ತು, ನಿಮಗಾಗಿ ಎರಡು ಪುಸ್ತಕಗಳನ್ನು ಸುಲತ ತೆಗೆದುಕೊಂಡಿದ್ದಾರೆ..ಹಾಗು ಶ್ರೀಕಾಂತಣ್ಣ ಕಾರ್ಯಕ್ರಮ ಸುಂದರವಾಗಿತ್ತು... ಎಲ್ಲರ ಮಾತುಗಳು ತುಂಬಾ ಖುಷಿ ಕೊಟ್ಟಿತು. ಅದರಲ್ಲೂ ಹೆಣ್ಣನ್ನು ಅಳಿಸಬೇಡಿ.. ಅವರ ಕಣ್ಣೀರನ್ನು ದೇವರು ಅಳೀತಾನೆ ಎನ್ನುವ ಮಾತು ಬಹಳ ಇಷ್ಟವಾಯಿತು.. ಚುಟುಕಗಳು ತುಂಬಾ ಇಷ್ಟವಾದವು " ಈ ಸಂದೇಶಗಳು ಮೊಬೈಲ್ ನಲ್ಲಿ ರಿಂಗಣಿಸಿದಾಗ ಮನಸ್ಸಿಗೆ ಬಂದ ಮಾತುಗಳು ಹಾಗೂ ಅವರ ಕೆಲ ಮಾತುಗಳು, ನನ್ನ ವಿಚಿತ್ರ ಕಲ್ಪನೆ ಇವೆಲ್ಲ ಸೇರಿ ಲೇಖನವಾಗಿ ಹರಡಿಕೊಂಡಿದೆ.. ಈ ಲೇಖನದಲ್ಲಿ ಮೂಡಿಬರುವ ಜೋಡಿ ಕಣ್ಣುಗಳ ಒಡತಿಯರು ಪುಟ್ಟಿ ಸುಷ್ಮಾ ಮತ್ತು ಸುಲತ ಸಿಸ್ಟರ್!)









